ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನ ಟೋಲ್ ಸಿಬ್ಬಂದಿ ಮೇಲೆ ಏಳು ಮಂದಿ ಕಾರು ಸವಾರರು ಹಲ್ಲೆ ನಡೆಸಿದ್ದಾರೆ.
ಭಟ್ಕಳ ನೋಂದಣಿ ನಂಬರ್ ಕಾರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಹಣ ಪಾವತಿಸಲು ತಿಳಿಸಿದ್ದಾರೆ. ಹಣ ಪಾವತಿ ಮಾಡೋದಿಲ್ಲ ಎಂದು ತಗಾದೆ ತೆಗೆದು ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಯಿಂದಾಗಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಬಳಿಕ ಹಲ್ಲೆ ನಡೆಸಿದ ಆರೋಪಿಗಳು ಕಾರಿನ ಸಮೇತ ಪರಾರಿಯಾಗಿದ್ದಾರೆ.
ಹಲ್ಲೆಯ ದೃಶ್ಯ ಟೋಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ ಎನ್ಹೆಚ್ಎಐ ಟೋಲ್ ಸಿಬ್ಬಂದಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Check Also
ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!
Spread the loveನವದೆಹಲಿ: ಗುಜರಾತ್ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …