Breaking News

ಹುಲಕುಂದ ಪಂಚಾಯ್ತಿ 13 ಸದಸ್ಯರು, 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Spread the love

 

ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 14 ಸದಸ್ಯರ ಪೈಕಿ 13 ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹೌದು ಮಂಗಳವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಪಂಚಾಯತಿಯ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಸತೀಶ ಜಾರಕಿಹೊಳಿ ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

: ಈ ವೇಳೆ ಮಾತನಾಡಿದ ಸತೀಶ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿ ಇಂದು ಹುಲಕುಂದ ಗ್ರಾಮ ಪಂಚಾಯತಿಯಿಂದ ಆಯ್ಕೆಯಾಗಿರುವ 13 ಸದಸ್ಯರು ಹಾಗೂ 30ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಸಂತದ ತಂದಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.

: ಈ ವೇಳೆ ಜಿ.ಪಂ.ಉಪಾಧ್ಯಕ್ಷ ಅರುಣ್ ಕಟಾಂಬಳೆ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಬೆಳಗಾವಿ ವರದಿ ಕುತುಬುದ್ದಿನ್.


Spread the love

About Laxminews 24x7

Check Also

ರೈತರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ! ಧಿಕ್ಕಾರ !!

Spread the loveರೈತರ ಸಂಕಷ್ಟವನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ! ಧಿಕ್ಕಾರ !! ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ