Breaking News

ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

Spread the love

ಧಾರವಾಡ, ಜನವರಿ 6: ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಬುಧವಾರದಂದು ಧಾರವಾಡ ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಅಷ್ಟೆ ಅಲ್ಲ ಇಂದು ಜಾಮೀನು ಸಿಗುವ ನಿರೀಕ್ಷೆ ಕೂಡ ಅವರ ಮಾಜಿ ಸಚಿವರ ಅಭಿಮಾನಿಗಳಿಗೆ ಇತ್ತು.

 

ಆದರೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರಿಗೆ ಯಾಕೆ ಜಾಮೀನು ನೀಡಬಾರದು ಎನ್ನುವ ಕುರಿತು ತಕರಾರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಲಾಯಿತು.

ಸದ್ಯಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲೆ ಇದ್ದಾರೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ಮತ್ತು ಬಂಧುಗಳು ಕಳೆದ ಒಂದು ವಾರದಿಂದ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಹಮ್ಮಿಕೊಂಡಿದ್ದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ