Breaking News

ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.
 ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ಮತ್ತು ಪ್ರಕರಣ ನಂಬರ್ 1 ಆರೋಪಿ ಶಿವಪ್ರಕಾಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಒಗ್ಗೂಡಿಸಿ ನ್ಯಾ.ನಾಗೇಶ್ವರಾವ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆಗೂ ಮುನ್ನ ಅನಾರೋಗ್ಯ ಹಿನ್ನಲೆ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಆರೋಪಿ ಶಿವಪ್ರಕಾಶ್ ಮನವಿ ಮಾಡಿದ ಹಿನ್ನಲೆ ವಿಚಾರಣೆ ಮುಂದೂಡಲಾಯಿತು. ಸೋಮವಾರ ಬದಲಿ ಪೀಠದಲ್ಲಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ.

ಈ ಹಿಂದೆ ಸಹ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿತ್ತು. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಸಹ ನಟಿ ಜೈಲಿನಲ್ಲೇ ಬರಮಾಡಿಕೊಳ್ಳುವಂತಾಗಿತ್ತು.

ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಲಾಗಿತ್ತು. ಅಲ್ಲದೆ ಅರ್ಜಿ ವಿಚಾರಣೆಯನ್ನು ಜನವರಿಗೆ ಮುಂದೂಡಿತ್ತು. ಆದರೆ ಇಂದು ವಿಚಾರಣೆ ಆರಂಭವಾಗುವುದಕ್ಕೂ ಮುನ್ನ ಆರೋಪಿ ಶಿವಪ್ರಕಾಶ್ ಅನಾರೋಗ್ಯದ ಹಿನ್ನೆಲೆ ಮನವಿ ಮಾಡಿದ್ದಕ್ಕೆ ಮತ್ತೆ ವಿಚಾರಣೆಯನ್ನು ಮುಂದೂಡಿದೆ.


Spread the love

About Laxminews 24x7

Check Also

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Spread the love ಬೆಂಗಳೂರು: ವಿಧಾನ ಪರಿಷತ್‌ ಖಾಲಿ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮೂವರು ಅಭ್ಯರ್ಥಿಗಳ ಪಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ