Breaking News

ರೈಲು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರ ಛಿದ್ರಗೊಂಡಿದೆ.

Spread the love

ಕಲಬುರ್ಗಿ ಜಿಲ್ಲೆ): ಚಿತ್ತಾಪುರ ಬಳಿಯ ಇಟಗಿ ಗ್ರಾಮದ ಹೊರವಲಯದಲ್ಲಿ ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಕರಿಬಸಪ್ಪ ಪಾಟೀಲ ಕೂಗನೂರ ಅವರು (64) ಶನಿವಾರ ಮಧ್ಯಾಹ್ನ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರೈಲು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರ ಛಿದ್ರಗೊಂಡಿದೆ. ದೂರದವರೆಗೂ ದೇಹದ ಅಂಗಗಳು ಬಿದ್ದಿವೆ. ಒಂದು ಕಾಲು ಸುಮಾರು 5 ಕಿ.ಮೀ ದೂರದಲ್ಲಿ ಬಿದ್ದಿದೆ.

ಇಟಗಿ ಸಮೀಪದ ರೈಲ್ವೆ ಹಳಿ ಬಳಿಯೇ ವ್ಯಕ್ತಿಯ ಜಮೀನು ಇದ್ದು, ಹಳಿ ದಾಟುವಾಗ ಈ ದುರ್ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ವಾಡಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ