Breaking News

ಎಲ್ಲರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ.: ಯತ್ನಾಳ

Spread the love

ವಿಜಯಪುರ (ಜ. 10); ಸಚಿವ ಸಂಪುಟ ವಿಸ್ತರಣೆಯಾಗುತ್ತೋ? ಪುನಾರಚನೆಯಾಗುತ್ತೋ? ಗೊತ್ತಿಲ್ಲ. ಆದರೆ, ಮಹತ್ವದ ನಿರ್ಣಯ ಕೈಗೊಳ್ಳಲು ಅಮಿತ್ ಶಾ ಸಿಎಂ ಯಡಿಯೂರಪ್ಪ  ಅವರನ್ನು ದೆಹಲಿಗೆ ಕರೆಯಿಸಿದ್ದಾರೆ ಅನಿಸುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ದೆಹಲಿಗೆ ತೆರಳಿದ್ದಾರೆ. ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ. ಪ್ರಧಾನಿ, ಗೃಹ ಸಚಿವರಿಗೆ ಅವರದ್ದೆ ಆದಂಥ ದೊಡ್ಡ ಜಾಲವಿದೆ.  ದೇಶದಲ್ಲಿ ಯಾರು ಏನು ಮಾಡುತ್ತಿದ್ದಾರೆ ಎಂಬುದು ಅವರಿಗೆ ಗೊತ್ತು. ಯಾವ ಶಾಸಕ, ಸಚಿವ, ಸಿಎಂ ಏನು ಮಾಡುತ್ತಿದ್ದಾರೆ ಎಂಬುದೂ ಪ್ರಧಾನಿ ಅವರಿಗೆ ಗೊತ್ತು. ಅವರು ಸೂಕ್ತ ನಿರ್ಣಯ ತೆಗದುಕೊಳ್ಳುತ್ತಾರೆ ಎಂದು ಯತ್ನಾಳ ಪರೋಕ್ಷವಾಗಿ ಎಲ್ಲರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ ಎಂದು ತಿಳಿಸಿದರು.ಸ್ತು ಕ್ರಮ ವಿಚಾರ

ನನ್ನ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲು ನಾನೇನು ಮಾಡಿದ್ದೇನೆ? ನನ್ನಿಂದ ಅಶಿಸ್ತೇ ಆಗಿಲ್ಲ. ಇನ್ನು ಶಿಸ್ತು ಕ್ರಮ ಎಲ್ಲಿಂದ? ನಾನೇನು ಪಕ್ಷದ ರಾಷ್ಟ್ರೀಯ ನಾಯಕರ ಬಗ್ಗೆ ಮಾತನಾಡಿದ್ದೇನೇಯೇ? ಸಿಎಂ ಹಾಗೂ ಸಚಿವರುಗಳ ಬಗ್ಗೆ ಮಾತನಾಡಿದ್ದೇನಾ? ನಾನು ಹೇಳಿದ್ದು ಜನಪರ ಕಾರ್ಯಕ್ರಮಗಳ ಬಗ್ಗೆ. ಅಭಿವೃದ್ಧಿಗಾಗಿ ಹೆಚ್ಚು ಹಣ ಕೇಳಿದ್ದೇನೆ.  ಕೋವಿಡ್ ವೇಳೆ ಖಾಸಗಿ ಆಸ್ಪತ್ರೆಗಳ ಸುಲಿಗೆ ಬಗ್ಗೆ ಮಾತನಾಡಿದ್ದೇನೆ. ಶುದ್ದ ಕುಡಿಯುವ ನೀರಿನ ಘಟಕಗಳ ಯೋಜನೆಯಲ್ಲಿ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದೇನೆ. ಸಿಎಂ ಅವರ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದೇನಾ? ಕೇಂದ್ರ ನಾಯಕರ ವಿರುದ್ಧ ಮಾತನಾಡಿದ್ದೇನಾ? ನಾನು ಪಕ್ಷದ ಶಿಸ್ತು ಮೀರಿ ನಡೆದಿಲ್ಲ.‌ ನಾನು ಶಿಸ್ತಿನಿಂದ ಕೆಲಸ ಮಾಡಿದ್ದೇನೆ. ನನ್ನ ಮೇಲೆ ಶಿಸ್ತು ಕ್ರಮವಿಲ್ಲ ಎಂದು ಯತ್ನಾಳ ಪುನರುಚ್ಚರಿಸಿದರು.

ತಮಗೆ ಶಿಸ್ತು ಕ್ರಮದ ಬಗ್ಗೆ‌ ನೋಟೀಸ್ ಬಂದಿಲ್ಲ. ಆದರೆ, ಶಿಸ್ತು ಕ್ರಮದ ಬಗ್ಗೆ ಮಾಧ್ಯಮದವರಿಗೆ ಹೆಚ್ಚಿನ ಆಸಕ್ತಿ ಇದೆ. ಅದರ ಬದಲು ನ್ಯಾಯಾಲಯ ಭ್ರಷ್ಟಾಚಾರದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಗಮ‌ಹರಿಸಬೇಕು ಎಂದು ಅವರು ತಿಳಿಸಿದರು.

ಸಚಿವನಾಗಬಾರದು ಎಂದು ನಿರ್ಣಯ

ಈ ಮಧ್ಯೆ ಬಿ ಎಸ್ ವೈ ಸಂಪುಟದಲ್ಲಿ ಸಚಿವನಾಗಬಾರದು ಎಂಬುದು ನನ್ನ ನಿರ್ಣಯ. ಬಿಎಸ್​ವೈ ಕೂಡ ನನಗೆ ಸಚಿವ ಸ್ಥಾನ ನೀಡುವುದಿಲ್ಲ ಎಂಬುದು ಗೊತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ನಾಯಕರು ಈ ಕುರಿತು ನಿರ್ಧಾರ ತೆಗದುಕೊಳ್ಳಲಿದ್ದಾರೆ. ಪ್ರಧಾನಿ, ಅಮಿತ್ ಶಾ ಅವರು ನಡ್ಡಾ ಅವರು ನಿರ್ಧಾರ ಮಾಡಬಹುದು. ಪ್ರಾದೇಶಿಕವಾರು, ಜಿಲ್ಲಾವಾರು ಜಾತೀವಾರು ಸೇರಿದಂತೆ ಎಲ್ಲವನ್ನೂ ಗಂಭೀರವಾಗಿ ಪರಿಗಣಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. ಏನು ಬದಲಾವಣೆ ಮಾಡುತ್ತಾರೋ ಗೊತ್ತಿಲ್ಲ. ನಾನ್ಯಾವತ್ತೂ ಸಿಎಂ ಬದಲಾಗುತ್ತಾರೆ ಎಂದು ಹೇಳಿಲ್ಲ‌ ಎಂದು ಅವರು ತಿಳಿಸಿದರು


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ