Breaking News

ಎಸಿಬಿ ಖೆಡ್ಡಾಗೆ ಬಿದ್ದ ಪಿಎಸ್‍ಐ, ಹೆಡ್‍ಕಾನ್‍ಸ್ಟೇಬಲ್..!

Spread the love

ಬೆಂಗಳೂರು, ಜ.12- ದೂರು ದಾಖಲಿಸಬಾರದು ಎಂದು ಮಹಿಳೆಯಿಂದ ಹಣದ ಬೇಡಿಕೆ ಇಟ್ಟಿದ್ದ ಪೊಲೀಸ್ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ದಾಖಲಿಸಬಾರದು ಎಂದು ಹೇಳಿದ ಮಹಿಳೆಯೊಬ್ಬಳಿಂದ ಪಿಎಸ್‍ಐ ಸೌಮ್ಯ ಮತ್ತು ಹೆಡ್‍ಕಾನ್‍ಸ್ಟೇಬಲ್‍ ಜೆ.ಪಿ.ರೆಡ್ಡಿ ಅವರು 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಂದ ನಿಖರ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿ ತನಿಖೆ ಮುಂದುವರೆಸಿದ್ದಾರೆ. ಮೊಬೈಲ್ ಪ್ರಕರಣವೊಂದರಲ್ಲಿ ಪತಿಯ ವಿರುದ್ಧ ದೂರು ದಾಖಲಿಸಲು ಅವರ ಪತ್ನಿ ಕೇಳಿಕೊಂಡಾಗ 1 ಲಕ್ಷ ಲಂಚದ ಹಣ ಕೇಳಿದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ