Breaking News

ಧಾರವಾಡದ ಬಳಿ ಭೀಕರ ರಸ್ತೆ ಅಪಘಾತ ಐವರ ದುರ್ಮರಣ: ಹಲವರಿಗೆ ಗಾಯ

Spread the love

ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ.

ವಾಹನದಲ್ಲಿ ಇನ್ನೂ ಶವಗಳು ಸಿಲುಕಿಕೊಂಡಿದ್ದು, ಅವುಗಳನ್ನ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಬಂದಾಗ ಈ ಭೀಕರ ಘಟನೆ ನಡೆದಿದೆ. ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ