Breaking News
Home / Uncategorized / ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?

ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?

Spread the love

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಂದ್ ಆದ್ರೂ, ಪರಿಣಾಮ ಬೀರೋದು, ಬೆಂಗಳೂರಿನ ವ್ಯಾಪಾರ ವಹಿವಾಟಿನ ಮೇಲೆ. ಕೊರೋನಾ ಮಧ್ಯೆಯೂ ಈಗಾಗಲೇ ಕರ್ನಾಟಕ ಬಂದ್, ಸೇರಿದಂತೆ ವಿವಿಧ ಬಂದ್ ಗಳಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆಯೂ ಜನವರಿ 22ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಅದು ಯಾಕೆ ಎನ್ನುವ ಬಗ್ಗೆ ಮುಂದೆ ಓದಿ..

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಅನೇಕರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಆದ್ರೇ ಹೀಗೆ ಬಂಧಿಸಿರುವವರಲ್ಲಿ ಅನೇಕರು ಅಮಾಯಕರು. ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಜನವರಿ 22ಕ್ಕೆ 28 ಮುಸ್ಲಿಂ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿವೆ.

ಈ ಕುರಿತಂತೆ ಸುದ್ದಿ ಸಂಸ್ಥೆಗಳಿಗೆ ಮಾಹಿತಿ ನೀಡಿರುವಂತ ವಿವಿಧ ಮುಸ್ಲಿಂ ಸಂಘಟನೆಗಳು, ಜನವರಿ 22ರಂದು 28ಕ್ಕೂ ಹೆಚ್ಚು ಮುಸ್ಲೀಂ ಸಂಘಟನೆಗಳು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಕರೆ ನೀಡಲಾಗಿದೆ. ಇದೇ ಕೇವಲ ಬೆಂಗಳೂರು ಗಲಭೆಗೆ ಮಾತ್ರ ಸೀಮಿತವಾಗಿಲ್ಲ. ಇದರೊಂದಿಗೆ ಲವ್ ಜಿಹಾದ್, ಕೃಷಿ ಕಾಯ್ದೆ ವಿರುದ್ಧವೂ ಪ್ರತಿಭಟನೆ ನಡೆಸಲು, ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವುದಾಗಿ ತಿಳಿಸಿವೆ.

ಜನವರಿ 22ರಂದು ಬೆಳಿಗ್ಗೆಯಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಮುಸ್ಲಿಂ ಮಾಲೀಕರು ತಮ್ಮ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಮನವಿ ಮಾಡಿರುವಂತ ಮುಸ್ಲೀಂ ಸಂಘಟನೆಗಳು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬೆಂಗಳೂರು ಬಂದ್ ನಡೆಸಲಾಗುತ್ತದೆ ಎಂದು ತಿಳಿಸಿವೆ.


Spread the love

About Laxminews 24x7

Check Also

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

Spread the loveನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ