Breaking News

ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ.

Spread the love

ಪುಣೆ: ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಿ ಲಸಿಕೆಗಾಗಿ ಬರುವ ಜನರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಭಾರತವು ಅತೀ ದೊಡ್ಡ ಲಸಿಕಾ ದಿನವನ್ನು ಆಚರಿಸಲು ಮುಂದಾಗುತ್ತಿದ್ದಂತೆ ಪುಣೆಯ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಮುಂಭಾಗ ನೀಲಿ ಮತ್ತು ಬಿಳಿ ಬಣ್ಣದ ಹೂವಿನ ರಂಗೋಲಿ ಬಿಡಿಸಿ ಮಧ್ಯದಲ್ಲಿ ಸ್ವಾಗತ ಎಂದು ಬರೆದು ಲಸಿಕೆ ಹಾಕಿಸಿಕೊಳ್ಳಲು ಬರುವ ಎಲ್ಲರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಆಸ್ಪತ್ರೆ ಸಿಬ್ಬಂದಿ ಲಸಿಕೆ ಅಂತಿಮವಾಗಿ ನಮ್ಮ ಕೈ ಸೇರಿರುವುದು ತುಂಬಾ ಸಂತೋಷವಾಗಿದೆ, ನಾವು ಲಸಿಕೆ ಕೊಡಲು ಸಿದ್ಧರಾಗಿದ್ದೇವೆ ಎಂದು ಸಂತೋಷ ಹಚ್ಚಿಕೊಂಡರು.
ದೇಶದ ಪ್ರಧಾನಿ ಮೋದಿ ಲಸಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಇದು ದೇಶಕ್ಕೆ ಸಿಕ್ಕಿರುವ ನಿರ್ಣಾಯಕ ಗೆಲುವು ಎಂದು ಬಣ್ಣಿಸಿದರು. ನಂತರ ಮಾತಾನಾಡಿದ ಮೋದಿ ಕೊರೊನಾ ವಿರುದ್ಧ ಲಸಿಕೆ ಬಂದರು ಕೂಡ ಯಾರು ಈ ಸಾಂಕ್ರಾಮಿಕ ರೋಗವನ್ನು ಲಘುವಾಗಿ ಪರಿಗಣಿಸಬೇಡಿ. ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಪಾಲಿಸುವುದು ಮರೆಯದಿರಿ ‘ದವಾಯಿ ಭಿ ಕಡೈ ಭಿ’ ಎಂದು ಜನರಿಗೆ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಸಕ್ರೆಬೈಲು ಆನೆ ಬಾಲಣ್ಣನ ಕಿವಿ ಕತ್ತರಿಸಿದ ವೈದ್ಯರ ತಂಡ: ಚಿಕಿತ್ಸೆ ಕುರಿತು ಡಿಎಫ್ಒ ಹೇಳಿದ್ದಿಷ್ಟು

Spread the love ಶಿವಮೊಗ್ಗ: ಸಕ್ರೆಬೈಲು ಆನೆ‌ ಬಿಡಾರದ ಬಾಲಣ್ಣ ಎಂಬ ಹೆಸರಿನ ಸಾಕಾನೆಯ ಬಲ ಕಿವಿಯನ್ನು ಬೆಂಗಳೂರಿನ ವೈದ್ಯರ ತಂಡವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ