Breaking News

ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ

Spread the love

ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಹಾಗೂ ಆತನೊಂದಿಗಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನ ಮಸ್ಕಿ ತಾಲೂಕಿನ ಅಡವಿಭಾವಿ ಗ್ರಾಮದ ಅರುಣಾಕ್ಷಿ (22), ರಜಿಯಾ ಬೇಗಂ (22) ಹಾಗೂ ವಿರೇಶ್ (23) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬೈಕ್ ರೈಡ್ ಮಾಡಿದ್ದರಿಂದ ಅಪಘಾತ ಸಂಭವಿಸಿದೆ.ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ ಡಿಪೋ ಹತ್ತಿರ ಘಟನೆ ನಡೆದಿದೆ. ಬೈಕ್ ಸವಾರ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ