Home / Uncategorized / ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌: ಮುಖ್ಯಮಂತ್ರಿ ಯಡಿಯೂರಪ್ಪ

ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌: ಮುಖ್ಯಮಂತ್ರಿ ಯಡಿಯೂರಪ್ಪ

Spread the love

ಕುಂದಾಪುರ: ಹಣಕಾಸಿನ ಇತಿಮಿತಿಯಲ್ಲಿ ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧಿಯಾಗಲಿ’ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದು ಖುದ್ದು ಬಂದು ಭೇಟಿಯಾಗಲಿದ್ದಾರೆ. ಪಕ್ಷದಲ್ಲಿ ಗೊಂದಲಗಳಿಲ್ಲ ಎಂದು ಸಿಎಂ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ರೇಣುಕಾಚಾರ್ಯ ಸಹಜವಾಗಿ ನೋವನ್ನು ವ್ಯಕ್ತಪಡಿಸಿದ್ದಾರೆ. ಮನುಷ್ಯ ಅಂದ ಮೇಲೆ ನೋವು ಸಹಜ. ಒಂದೆರಡು ದಿನ ನೋವು ಹೊರಹಾಕುತ್ತಾರೆ. ಪಕ್ಷದ ಚೌಕಟ್ಟಿನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಅವಕಾಶವಿದೆ. ಎಲ್ಲವನ್ನು ಸರಿದೂಗಿಸಿಕೊಂಡು ಹೋಗುವ ವಿಶ್ವಾಸವಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ

Spread the love ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ