Breaking News
Home / Uncategorized / ಉದ್ಧವ್​ ಠಾಕ್ರೆ ಬೆಳಗಾವಿಗೆ ಕಾಲಿಟ್ಟು ನೋಡಲಿ; ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡು ಕೂತಿಲ್ಲ; ಶಾಸಕ ಶರಣಬಸ್ಸಪ್ಪಗೌಡ ಎಚ್ಚರಿಕೆ

ಉದ್ಧವ್​ ಠಾಕ್ರೆ ಬೆಳಗಾವಿಗೆ ಕಾಲಿಟ್ಟು ನೋಡಲಿ; ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡು ಕೂತಿಲ್ಲ; ಶಾಸಕ ಶರಣಬಸ್ಸಪ್ಪಗೌಡ ಎಚ್ಚರಿಕೆ

Spread the love

ಯಾದಗಿರಿ(ಜ.19): ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಗೆ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಸವಾಲ್ ಹಾಕಿದ್ದಾರೆ. ಉದ್ದವ್ ಠಾಕ್ರೆ ಕರ್ನಾಟಕಕ್ಕೆ  ಬಂದು, ಬೆಳಗಾವಿಯಲ್ಲಿ ಒಂದಿಂಚು ಜಾಗ ತೆಗೆದುಕೊಂಡು ನೋಡಲಿ,  ಸಿಎಂ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರದಿಂದ ಜನರನ್ನು ಕರೆದುಕೊಂಡು ಬರಲಿ ಎಂದು ಸವಾಲು ಹಾಕಿದ್ದಾರೆ. ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡಿಲ್ಲ‌.ಕನ್ನಡಿಗರು ಸುಮ್ಮನೆ ಇದ್ದರೆ ಸುಮ್ಮನೆ ಇರುತ್ತೇವೆ. ನಮಗೆ ತೊಂದರೆ ಕೊಟ್ಟರೆ ನಾವೇನು ಮಾಡುತ್ತೀವಿ ಅಂತ ಇತಿಹಾಸ ತಿಳಿಸುತ್ತದೆ ಎಂದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮೇಲೆ ಹಲವಾರು ಆರೋಪಗಳಿವೆ. ಈಗಾಗಲೇ ಸಚಿವರು ಹಾಗೂ ಬಿಜೆಪಿ ಶಾಸಕರು ಆರೋಪಗಳ ಬಗ್ಗೆ ಬಿಜೆಪಿ ಹೈಕಮಾಂಡ್ ಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಬಿಎಸ್ ವೈ ಅವರನ್ನು ಸಿಎಂ ಸ್ಥಾನದಿಂದ ಬಿಎಸ್ ವೈ ಅವರನ್ನು ಮುಂದುವರೆಸಲು ಸಾಧ್ಯವಿಲ್ಲ . ಸಿಎಂ ಸ್ಥಾನದಿಂದ ಬಿಎಸ್ ವೈ ಅವರನ್ನು  ತೆಗೆಯುತ್ತಾರೆ ಎಂದು ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಸಿಎಂ ಬಿಎಸ್ ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ