ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ.
ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ ನಡೆಸಿದ್ದಾರೆ.