Breaking News

ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಗೃಹ ಸಚಿವ ಬೊಮ್ಮಾಯಿ – ಮಾಜಿ ಸಿಎಂ ಹೆಚ್ಡಿಕೆ ಭೇಟಿ

Spread the love

ಬೆಂಗಳೂರು : ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್.ಟಿ. ನಗರದ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ, ಅರ್ಧ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಕ್ಷೇತ್ರದ ಕೆಲ ಪೋಸ್ಟಿಂಗ್ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ನಮ್ಮದು ಹಳೆಯ ಸ್ನೇಹ. ಒಂದೇ ಕುಟುಂಬದ ರೀತಿ ಇದ್ದೇವೆ. ದೇವೇಗೌಡರು ಹಾಗೂ ಎಸ್.ಆರ್. ಬೊಮ್ಮಾಯಿ ಸ್ನೇಹಿತರು. ಆ ಕಾಲದಿಂದಲೂ ನಮ್ಮ ಸ್ನೇಹ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ