Breaking News

ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ

Spread the love

ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ.

ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ ಬಟಾಲಿಯನ್ ದಿಂದ ಕೃಷ್ಣಾ ಬಡಿಗೇರ ಈತನು ಪರೇಡನಲ್ಲಿ ಭಾಗವಹಿಸುತ್ತಿದ್ದಾನೆ.

ಈತನ ಸಾಧನೆಗೆ ಪ್ರಭುನೀಲಕಂಠ ಸ್ವಾಮೀಜಿ, ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಸಿ.ಎಸ್.ಸಾಧುನವರ, ಪ್ರಾಚಾರ್ಯ, 25 ನೇ ಬಟಾಲಿಯನ್ ಅಧಿಕಾರಿಗಳು, ಆಡಳಿತ ಮಂಡಳಿ, ಹಾಗೂ ಸಿಬ್ಬಂದಿ ಎನ್.ಸಿ.ಸಿ ಅಧಿಕಾರಿ ಕ್ಯಾಪ್ಟನ್ ಮೃತ್ಯುಂಜಯ ಹೇಮಗಿರಿಮಠ ಸಂತಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. ಜಯರಾಮ್ ಸರ್ ಇಂದು ಸೇವಾ ನಿವೃತ್ತಿ

Spread the loveಬಹು ಸಂಸ್ಕೃತಿ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯ ಜನಪ್ರಿಯ ಜಿಲ್ಲಾಧಿಕಾರಿ ಸುಧೀರ್ಘ ಅವಧಿ ಸೇವೆ ಸಲ್ಲಿಸಿದ ಎನ್. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ