ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು ನೀಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು ನೀಡುತ್ತೇವೆ. ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ. ಒಪ್ಪಿಗೆ ನೀಡುತ್ತೆ ಎನ್ನುವ ವಿಶ್ವಾಸವಿದೆ’ ಎಂದರು.