Breaking News
Home / ರಾಜ್ಯ / BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!

BIG NEWS : ಸುಧಾಕರ್ ಒತ್ತಡಕ್ಕೆ ಮಣಿದ ಸಿಎಂ, ಒಂದೇ ವಾರದಲ್ಲಿ 3 ಬಾರಿ ಖಾತೆ ಬದಲು..!

Spread the love

ಬೆಂಗಳೂರು,ಜ.25-ಕೊನೆಗೂ ಮುನಿಸಿಕೊಂಡಿದ್ದ ಕೆಲವು ಸಚಿವರ ಅಸಮಾಧಾನವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮತ್ತೆ ಖಾತೆಗಳನ್ನು ಬದಲಾವಣೆ ಮಾಡಲಾಗಿದೆ. ಸಚಿವ ಡಾ.ಕೆ.ಸುಧಾಕರ್ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗೆ ಜೊತೆಗೆ ವೈದ್ಯಕೀಯ ಖಾತೆಯನ್ನು ಮತ್ತೆ ಅವರಿಗೇ ನೀಡಿದ್ದಾರೆ.

ಜೊತೆಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿಗೆ ಈಗ ಪ್ರವಾಸೋದ್ಯಮ ಖಾತೆಯನ್ನು ನೀಡಲಾಗಿದೆ. ಕಳೆದ ವಾರ ನೂತನ ಸಚಿವರನ್ನು ಖಾತೆ ಹಂಚಿಕೆ ಮಾಡುವ ವೇಳೆ ವೈಜ್ಞಾನಿಕ ಶಿಕ್ಷಣ ಖಾತೆಯನ್ನು ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು ಜೆ.ಸಿ.ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು. ಈ ಬೆಳವಣಿಗೆಯಿಂದ ಸುಧಾಕರ್ ಮುನಿಸಿಕೊಂಡು ಸಚಿವ ಸಂಪುಟಕ್ಕೆ ಗೈರು ಹಾಜರಾಗಿದ್ದಲ್ಲದೆ ಕೆಲವು ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ