Breaking News

ಮೂವರು ಸಚಿವರ ಖಾತೆಗಳಲ್ಲಿ ಮತ್ತೆ ಬದಲಾವಣೆ : ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ

Spread the love

ಬೆಂಗಳೂರು: ಬಿಎಸ್ ವೈ ಸಂಪುಟದ ಸಚಿವರುಗಳ ಖಾತೆಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಡಾ.ಕೆ ಸುಧಾಕರ್, ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರುಗಳ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತವೂ ದೊರೆತಿದೆ.

ಆರೋಗ್ಯ ಸಚಿವ ಕೆ ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿದೆ. ಮೊನ್ನೆ ಖಾತೆ ಬದಲಾವಣೆ ಸಂದರ್ಭದಲ್ಲಿ ಈ ಖಾತೆಯನ್ನು ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಇದಕ್ಕೆ ಸುಧಾಕರ್ ಆಕ್ಷೇಪ ವ್ಯಕ್ತಪಡಿಸಿದ್ದರು.

ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿ ಅವರಿಗೆ ಖಾತೆ ಬದಲಾವಣೆ ಮಾಡಿ ಪ್ರವಾಸೋದ್ಯಮ, ಪರಿಸರ ಖಾತೆ ಮತ್ತು ಪರಿಸರ ವಿಜ್ಞಾನ ಖಾತೆಯನ್ನು ನೀಡಲಾಗಿದೆ.

ಪ್ರವಾಸೋದ್ಯ ಸಚಿವರಾಗಿದ್ದ ಆನಂದ್ ಸಿಂಗ್ ಅವರಿಗೆ ಮೂಲಸೌಕರ್ಯ ಅಭಿವೃದ್ಧಿ ಇಲಾಖ ಹಾಗೂ ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ