Breaking News

ಸತ್ಯಕ್ಕೆ ಜಯ, ಸತ್ಯಮೇವ ಜಯತೇ: ರಾಗಿಣಿ

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಬಂಧಿತರಾಗಿದ್ದ ನಟಿ ರಾಗಿಣಿ 144 ದಿನಗಳ ಬಳಿಕ ಪರಪ್ಪನ ಅಗ್ರಹಾರದಿಂದ ಹೊರಬರುತ್ತಿದ್ದಂತೆ ನಿಜವಾಗಿ ಸತ್ಯಕ್ಕೆ ಜಯವಾಗಿದೆ, ಸತ್ಯಮೇವ ಜಯತೇ ಎಂದಿದ್ದಾರೆ.

ಜೈಲಿನಿಂದ ಹೊರಬಂದು ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಇಷ್ಟು ದಿನ ನನ್ನ ಪರ ನಿಂತಿದ್ದ ಬಂಧುಗಳಿಗೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸುತ್ತಿದ್ದೇನೆ. ನಾನು ನ್ಯಾಯಾಲಯದ ಮೇಲೆ ತುಂಬಾ ನಂಬಿಕೆ ಇಟ್ಟಿದ್ದೆ. ಹಾಗಾಗಿ ನನಗೆ ಸಿಕ್ಕ ಜಯವಿದು. ನಾನು ತುಂಬಾ ಹೋರಾಟಗಳನ್ನು ನಡೆಸಿ ಜೈಲಿನಿಂದ ಹೊರಗಡೆ ಬಂದಿದ್ದೇನೆ. ಈ ಸಮಯದಲ್ಲಿ ನನ್ನೊಂದಿಗೆ ನಿಂತ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಇಡೀ ಕರ್ನಾಟಕದ ಜನತೆಯ ಮುಂದೆ ಹೇಳುತ್ತಿದ್ದೇನೆ. ಸತ್ಯವನ್ನು ಯಾರೂ ಕೂಡ ಮುಚ್ಚಿಡಲು ಸಾಧ್ಯವಿಲ್ಲ ಎಂದು ಸಾಬೀತಾಗಿದೆ. ಇನ್ನೂ ಕೆಲದಿನಗಳ ನಂತರ ಮಾಧ್ಯಮಗಳೊಂದಿಗೆ ಹಲವು ವಿಷಯಗಳನ್ನು ಹಂಚಿಕೊಳ್ಳಲು ಇದೆ ಎಂದು ತಿಳಿಸಿದರು.
ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಇಡೀ ಕರ್ನಾಟಕದ ಜನತೆಯ ಮುಂದೆ ಹೇಳುತ್ತಿದ್ದೇನೆ. ಸತ್ಯವನ್ನು ಯಾರೂ ಕೂಡ ಮುಚ್ಚಿಡಲು ಸಾಧ್ಯವಿಲ್ಲ ಎಂದು ಸಾಬೀತಾಗಿದೆ. ಇನ್ನೂ ಕೆಲದಿನಗಳ ನಂತರ ಮಾಧ್ಯಮಗಳೊಂದಿಗೆ ಹಲವು ವಿಷಯಗಳನ್ನು ಹಂಚಿಕೊಳ್ಳಲು ಇದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ