ಕೊಪ್ಪಳ: ನವದೆಹಲಿಯ ಕೆಂಪುಕೋಟೆಗೆ ರೈತರು ನುಗ್ಗಿ ರೈತರು ಬೇರೆ ಧ್ವಜವೊಂದು ಹಾರಿಸಿದ್ದಾರೆ. ಈ ನಡುವೆ ರಾಜ್ಯದಲ್ಲೂ ಕೂಡ ರೈತರ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇವರಲ್ಲದರ ನಡುವೆ ಸಚಿವ ಬಿ.ಸಿ ಪಾಟೀಲ್ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್ ಇದೇ ಅನ್ನುವುದರ ಮೂಲಕ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಿರೋದು ಭಯೋತ್ಪದಕರು, ಇವರಿಗೆಲ್ಲ ಬೇರೆ ಬೇರೆ ದೇಶದ ಬೆಂಬಲವಿದ್ದು, ಕಾಂಗ್ರೆಸ್ನವರು ಸಾಥ್ ನೀಡುತ್ತಿದ್ದಾರೆ. ಸ್ವಾತಂತ್ರ್ಯ ಚಳುವಳಿಯ ವೇಳೆಯಲ್ಲಿ ಗಾಂಧಿಜೀಯವರು ಕೂಡ ಶಾಂತಿಯಾಗಿ ತಮ್ಮ ಹೋರಾಟವನ್ನು ನಡೆಸಿದರು. ಕೆಂಪು ಧ್ವಜವನ್ನು ಇಳಿಸಿದ್ದಾರೆ ಅಂತ ಕಿಡಿಕಾರಿದರು.
Home / Uncategorized / ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್ ಇದೇ: ಬಿ.ಸಿ ಪಾಟೀಲ್
Check Also
ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
Spread the loveನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ …