Breaking News
Home / ಜಿಲ್ಲೆ / ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು

ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು

Spread the love

ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ.

ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ.

ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ ಬಗ್ಗೆಯೇ ಮಹಾರಾಷ್ಟ್ರ ಸಿಎಂ ಹೆಚ್ಚೆಚ್ಚು ಮಾತನಾಡುವುದು. ಅವರ ಹೇಳಿಕೆ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದು ಬೇಡ ಎಂದರು.
ಬೆಳಗಾವಿ ಯಾವಾಗಲೂ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಸಚಿವ ಶ್ರೀಮಂತ ಪಾಟೀಲ್​ ತಿರುಗೇಟು ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ