Breaking News

ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಮರು ತನಿಖೆಗೆ ಹೈಕೋರ್ಟ್‌ ನಕಾರ

Spread the love

ಬೆಂಗಳೂರು: ಧರ್ಮಸ್ಥಳದ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ಮರು ತನಿಖೆಗೆ ವಹಿಸಲು ಹೈಕೋರ್ಟ್‌ ನಿರಾಕರಿಸಿದೆ.

ಪ್ರಕರಣವನ್ನು ಸಿಬಿಐಗೆ ಮರು ತನಿಖೆಗೆ ವಹಿಸಬೇಕು ಎಂದು ಕೋರಿ ಸೌಜನ್ಯ ತಂದೆ ಚಂದಪ್ಪಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಕೆ. ಸೋಮಶೇಖರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಆದೇಶ ಹೊರಡಿಸಿದೆ.

ಈಗಾಗಲೇ ಪ್ರಕರಣವನ್ನು ಸ್ಥಳೀಯ ಪೊಲೀಸರು, ಸಿಐಡಿ ಬಳಿಕ ಸಿಬಿಐ ತನಿಖೆ ನಡೆಸಿದೆ. ಸಂತೋಷ್‌ ರಾವ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಹ ಸಲ್ಲಿಸಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಸಂತೋಷ್‌ ರಾವ್‌ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಈ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ಸಿಬಿಐ ನಡೆಸಿರುವ ತನಿಖೆ ಸಮರ್ಪಕ ಮತ್ತು ನ್ಯಾಯಬದ್ಧವಾಗಿದೆ. ಧೀರಜ್‌ ಜೈನ್‌, ಉದಯ್‌ ಜೈನ್‌ ಹಾಗೂ ಮಲ್ಲಿಕ್‌ ಜೈನ್‌ ವಿರುದ್ಧ ಸಂಶಯ ವ್ಯಕ್ತಪಡಿಸಿ, ಅರ್ಜಿದಾರರು ಮರು ತನಿಖೆಗೆ ಕೋರಿದ್ದಾರೆ. ಆದರೆ, ಸಂಶಯ ಋಜುವಾತುಪಡಿಸುವ ಸಾಕ್ಷ್ಯಗಳನ್ನು ಒದಗಿಸಲಾಗಿಲ್ಲ. ಮೇಲಾಗಿ, ಒಮ್ಮೆ ಸಿಬಿಐ ತನಿಖೆ ನಡೆಸಿರುವ ಪ್ರಕರಣವನ್ನು ಮರು ತನಿಖೆಗೆ ವಹಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ಮರು ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ