Breaking News

ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ :

Spread the love

ಬೆಂಗಳೂರು: ಬೆಳಗಾವಿ ಗಡಿ ಭಾಗ, ಬೆಳಗಾವಿ ನೆಲ ಕರ್ನಾಟಕದ ಒಂದು ಅಂಗ. ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮಹಾರಾಷ್ಟ್ರ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿನಾಡಿನಲ್ಲಿ ಕನ್ನಡಿಗರೂ ಇದ್ದಾರೆ. ಇತ್ತೀಚೆಗೆ ಮರಾಠಿಗರು ಸಹ ಕರ್ನಾಟಕದ ಶಾಲೆಗಳಲ್ಲಿ ಕಲಿಯಲು ಇಷ್ಟ ಪಡುತ್ತಿದ್ದಾರೆ ಎಂದರು.

ಯಾವ ಮರಾಠಿಗರು ಸಹ ನಾವು ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಯಾವತ್ತು ಹೇಳಿಲ್ಲ ಎಂದ ಅವರು, ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ಯಾವುದೇ ಕಾರಣಕ್ಕೂ ಗಡಿ ಜಿಲ್ಲೆ ಮರಾಠಿಗರು ನಿಮ್ಮನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗೆ ತಿರುಗೇಟು ನೀಡಿದರು.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ