Breaking News

ಧಾರವಾಡಕ್ಕೆ ನೆರವು ಘೋಷಿಸಿದ ಸುಧಾಮೂರ್ತಿ

Spread the love

ಧಾರವಾಡ: ಕೊರೊನಾದಿಂದ ಉಂಟಾಗಿರುವ ಸಂಕಷ್ಟ ಪರಿಹಾರೋಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನವು ಈಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 20 ಲಕ್ಷ ರೂ.ಗಳ ಪ್ರತ್ಯೇಕ ನೆರವು ಘೋಷಿಸಿದೆ.

ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕು ಒಳಗೊಂಡು ಪರಿಹಾರ ಕಾರ್ಯ ಕೈಗೊಳ್ಳುವುದಕ್ಕಾಗಿ ಸುಧಾಮೂರ್ತಿಯವರು ಈ ನೆರವು ನೀಡಿದ್ದು, ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸಂಸ್ಥೆಗಳ ಮೂಲಕ ಈ ಪರಿಹಾರ ಕಾರ್ಯಗಳು ನಡೆಯಲಿವೆ.

ಈ ಹಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತರು ಹಾಗೂ ಪೌರ ಕಾರ್ಮಿಕರಿಗೆ ವೈಯಕ್ತಿಕ ಸ್ಯಾನಿಟೈಜರ್ ವಿತರಣೆ, ಉತ್ತಮ ಗುಣಮಟ್ಟದ ವೈದ್ಯಕೀಯ ಮಾಸ್ಕ್ ವಿತರಣೆ ಮಾಡಲಾಗುತ್ತದೆ. ಜೊತೆಗೆ ಸಂಕಷ್ಟದಲ್ಲಿರುವ ಹುಬ್ಬಳ್ಳಿ ತಾಲೂಕಿನ ಗೋಕುಲ ಹಾಗೂ ಸುತ್ತಮುತ್ತಲಿನ ಗೋಸಾವಿ, ಹರಿಣಶಿಕಾರಿ, ಕುಂಚಿಕೊರವ ಸಮಾಜದ ಜನರಿಗೆ ಹತ್ತು ದಿನಗಳಿಗೆ ಆಗುವಷ್ಟು ದಿನಸಿ ವಿತರಣೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ