ನವದೆಹಲಿ: ದೆಹಲಿ- ಉತ್ತರಪ್ರದೇಶ ನಡುವಿನ ಗಡಿ ಪ್ರದೇಶ ಗಾಜಿಪುರ್ ಬಾರ್ಡರ್ನಲ್ಲಿ ರಾತ್ರೋರಾತ್ರಿ ಮತ್ತೆ ರೈತರು ಜಮಾವಣೆಗೊಂಡಿದ್ದಾರೆ. ಉತ್ತರಪ್ರದೇಶದ ಮುಜಾಫ್ಪರ್ನಗರ್ನಿಂದ ರೈತರ ದಂಡು ಹರಿದುಬಂದ ಹಿನ್ನೆಲೆ ಗಾಜಿಪುರ್ ಬಾರ್ಡರ್ ಕ್ಲೋಸ್ ಆಗಿದೆ.
ಗಾಜಿಪುರ್ ಬಾರ್ಡರ್ ಕ್ಲೋಸ್ ಆದ ಹಿನ್ನೆಲೆ ರಸ್ತೆ ಮಾರ್ಗವನ್ನ NH-24, NH-9, ರಸ್ತೆ ನಂಬರ್ 56, 57A, ಕೊಂಡ್ಲಿ, ಪೇಪರ್ ಮಾರ್ಕೆಟ್, ಟೆಲ್ಕೋ ಟಿ ಪಾಯಿಂಟ್, EDM ಮಾಲ್, ಅಕ್ಷರಧಾಮ್, ನಿಜಾಮುದ್ದೀನ್ ಖಟ್ಟಾ ಕಡೆಗೆ ಬದಲಿಸಲಾಗಿದೆ. ವಿಕಾಸ್ ಮಾರ್ಗ ಸೇರಿದಂತೆ ಬಾರ್ಡರ್ನಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿರುವ ಬಗ್ಗೆ ವರದಿಯಾಗಿದೆ.
ಇನ್ನು ಸಿಂಘು, ಔಚಂಡಿ, ಮಂಗೇಶ್, ಸಬೋಲಿ, ಪಿಯಾವು ಮಣಿಯಾರಿ ಬಾರ್ಡರ್ಗಳೂ ಸಹ ಬಂದ್ ಆಗಿದ್ದು ಲಂಪುರ್, ಸಫಿಯಾಬಾದ್, ಸಿಂಘು ಸ್ಕೂಲ್ ಮತ್ತು ಪಲ್ಲ ಟೋಲ್ ಟ್ಯಾಕ್ಸ್ ಬಾರ್ಡರ್ಗಳನ್ನ ತೆರೆಯಲಾಗಿದೆ. NH44 ಬಳಿ ಟ್ರಾಫಿಕ್ ಡೈವರ್ಟ್ ಮಾಡಲಾಗಿದ್ದು ಔಟರ್ ರಿಂಗ್ ರೋಡ್, GTK ರೋಡ್ ಮತ್ತು NH44 ಮಾರ್ಗಗಳನ್ನು ಅವಾಯ್ಡ್ ಮಾಡಿ ಎಂದು ದೆಹಲಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.