ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 67 ನೇ ದಿನಕ್ಕೆ ಕಾಲಿಟ್ಟಿದ್ದು, ಫೆಬ್ರವರಿ 2 ರಂದು ಕೇಂದ್ರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ.
ಗಾಜೀಪುರ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ರೈತರು ಆಗಮಿಸುತ್ತಿರುವುದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಕಾಯ್ದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಹಾಗಾದರೆ ಮಾತ್ರ ಅದು ಸರ್ಕಾರಕ್ಕೆ ಮತ್ತು ರೈತರಿಗೆ ಅನುಕೂಲವಾಗಲಿದೆ ಎಂದು ರೈತರು ಹೇಳಿದ್ದಾರೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 67 ನೇ ದಿನಕ್ಕೆ ಕಾಲಿಟ್ಟಿದ್ದು, ಇನ್ನು ಫೆಬ್ರವರಿ 2 ರಂದು ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ.