ಕಲಬುರ್ಗಿ(ಫೆ.01): ಕೋವಿಡ್ ನಂತರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಹು ನಿರೀಕ್ಷಿತ ಬಜೆಟ್ ಕೆಲ ವಲಯಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ. ಅದರಲ್ಲಿಯೂ ಅತ್ಯಂತ ಹಿಂದುಳಿದ ಭಾಗವೆನಿಸಿಕೊಂಡ ಹೈದರಾಬಾದ್ ಕರ್ನಾಟಕಕ್ಕೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದಾಗಿ ಈ ಭಾಗದ ಜನತೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಗಳೆಲ್ಲವೂ ಹುಸಿಯಾಗುವ ಜೊತೆಗೆ ತೈಲ ದರ ಏರಿಕೆಯ ಬರೆ ಹಾಕಿಸಿಕೊಳ್ಳುವಂತಾಗಿದೆ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಇಂದು ಮಂಡಿಸಿದ ಬಜೆಟ್ ಮೇಲೆ ಹೈದರಾಬಾದ್ ಕರ್ನಾಟಕ ಅಥವಾ ಕಲ್ಯಾಣ ಕರ್ನಾಟಕದ ಜನತೆ ಬೆಟ್ಟದಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದರು. ಹಿಂದುಳಿದ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ಸಿಗಲಿದೆ. ರೈಲ್ವೆ ವಿಭಾಗೀಯ ಕೇಂದ್ರಕ್ಕೆ ಹೆಚ್ಚಿನ ಅನುದಾನ ಘೋಷಣೆಯಾಗಲಿದೆ. ಕಲಬುರ್ಗಿಯಲ್ಲಿ ಏಮ್ಸ್ ಸ್ಥಾಪಿಸೋ ಘೋಷಣೆಯಾಗಲಿದೆ