Breaking News

ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Spread the love

ನವದೆಹಲಿ: ಆಸ್ಪತ್ರೆಗೆ ತೆರಳುವಾಗಲೇ ಭಾರಿ ಹಿಮಪಾತವಾದ್ದರಿಂದ, ಮಹಿಳೆಯೊಬ್ಬರು ಭಾರತೀಯ ಸೇನೆಯ ಆಂಬ್ಯುಲೆನ್ಸ್‌ ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಕುಪ್ವಾರದ ನರಿಕೂಟ್ ನಲ್ಲಿ ಭಾರಿ ಹಿಮಪಾತವಾಗುತ್ತಿದ್ದರಿಂದ ಆಶಾ ಕಾರ್ಯಕರ್ತೆಯೊಬ್ಬರು ಸೇನಾ ಆಯಂಬುಲೆನ್ಸ್ ಗೆ ಕರೆ ಮಾಡಿ ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಂತೆ ಕೋರಿಕೊಂಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಸೇನಾ ಆಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಮಹಿಳೆಯ ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಮಹಿಳೆ ಮತ್ತು ನವಜಾತ ಶಿಶುವನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಕರೆ ಬಂದ ಕೂಡಲೇ ಸೈನ್ಯದ ವಾಹನವನ್ನು ವೈದ್ಯಕೀಯ ತಂಡದೊಂದಿಗೆ ನರಿಕೂಟ್‌ಗೆ ಕಳುಹಿಸಿ ಕೊಡಲಾಗಿತ್ತು. ಈಗ ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.


Spread the love

About Laxminews 24x7

Check Also

ಯತೀಂದ್ರ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ; ಲೀಡರ್ ಯಾರಾಗಬೇಕು ಅಂತಾ ಹೈಕಮಾಂಡ್ ತೀರ್ಮಾನಿಸುತ್ತೆ: ಸಿಎಂ ಸಿದ್ದರಾಮಯ್ಯ

Spread the loveಬೆಳಗಾವಿ: ಮುಂದಿನ ಉತ್ತರಾಧಿಕಾರಿ ಸತೀಶ್​ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ