Breaking News
Home / ಜಿಲ್ಲೆ / ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ‌ ಭೇಟಿಯಾದ ರೈತರ ನಿಯೋಗ

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ‌ ಭೇಟಿಯಾದ ರೈತರ ನಿಯೋಗ

Spread the love

ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಹೇಳಿದರು.

 

ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ‌*, ನಮ್ಮ ಪಾಲಿನ‌ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು.

ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ ಮತ್ತು ಪರಿಹಾರದ ಹಣವನ್ನು ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವರು, ರೈತರಿಗೆ ಭರವಸೆ ನೀಡಿದರು.

ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಮಹದಾಯಿ ಹೋರಾಟ ಸಮಿತಿಯ ಅಧ್ಯಕ್ಷ ದ್ಯಾಮಪ್ಪಯ್ಯ ಸೇರಿದಂತೆ ಅನೇಕ ರೈತ ಮುಖಂಡರು ಭಾಗವಹಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ