Breaking News

ಈ ಸರ್ಕಾರ ಡಕೋಟಾ ಬಸ್ʼನಂತೆ ಕೆಟ್ಟಿದೆ, ಗೇರ್ ಹಾಕೋಗಲ್ಲ, ಒಂದ್ವೇಳೆ ಗೇರ್ ಹಾಕಿದ್ರೂ ಕಿತ್ತಿ ಬರುತ್ತೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಈ ಸರ್ಕಾರ ಡಕೋಟಾ ಎಕ್ಸ್‌ಪ್ರೆಸ್‌ ಸಿನಿಮಾದ ಬಸ್ʼನಂತಿದೆ. ರಸ್ತೆಯಲ್ಲೇ ಡಕೋಟಾ ಬಸ್ ರೀತಿ ಕೆಟ್ಟು ಹೋಗಿದೆ. ಗೇರ್ ಹಾಕೋಕೆ ಆಗೋದಿಲ್ಲ, ಹಾಕಿದ್ರು ಗೇರ್ ಕಿತ್ತಿಕೊಂಡು ಬರುತ್ತೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ‘ ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದ ಸುಳ್ಳುಗಳನ್ನ ಹೇಳಿಸಿದೆ. ಭಾಷಣದಲ್ಲಿ ಒಂಚೂರು ಸತ್ಯವಿಲ್ಲ. ಇದಕ್ಕೆ ಮುಂದಾಲೋಚನೆ‌ ಇಲ್ಲ, ದೂರದೃಷ್ಟಿಯೂ ಇಲ್ಲ. ಭಾಷಣದಲ್ಲಿ ಯಾವುದೇ ಸತ್ವವಿಲ್ಲ. ನಮ್ಮ ಯೋಜನೆಗಳನ್ನೇ ಭಾಷಣದಲ್ಲಿ ಪ್ರಸ್ತಾಪ ಮಾಡಿ ನಮ್ಮ ಸಾಧನೆಯನ್ನೇ ಅವರು ಹೇಳಿಕೊಂಡಿದ್ದಾರೆ. ಇದು ಚುನಾಯಿತ ಸರ್ಕಾರ ಮಾಡುವ ಕೆಲಸವಲ್ಲ’ ಎಂದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ