Breaking News

ರಾಜ್ಯದ ಎಲ್ಲಾ ಉತ್ಪನ್ನಗಳ ಪ್ಯಾಕೆಟ್‍ಗಳ ಮೇಲೆ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು,

Spread the love

ಬೆಂಗಳೂರು, – ರಾಜ್ಯದ ಎಲ್ಲಾ ಉತ್ಪನ್ನಗಳ ಪ್ಯಾಕೆಟ್‍ಗಳ ಮೇಲೆ ಕನ್ನಡವನ್ನು ಪ್ರಧಾನವಾಗಿ ಬಳಸಬೇಕು, ಕನ್ನಡದ ಹೆಸರುಗಳನ್ನು ದಪ್ಪಅಕ್ಷರಗಳಲ್ಲಿ ಕಾಣುವಂತೆ ಹಾಕುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಒತ್ತಾಯಿಸಿದರು. ರಾಜಾಜಿನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಪಂಚದಾಧ್ಯಂತ ಕರ್ನಾಟಕದ ಅಸ್ಮಿತೆಯನ್ನು ಜಗತ್ತಿಗೆ ಸಾರುವ ಸಂಸ್ಥೆಯಿದು.

ಇದರ ಪ್ರತಿಯೊಂದು ಉತ್ಪನ್ನಗಳ ಮೂಲಕ ಜಗತ್ತಿನಾದ್ಯಂತ ಕರ್ನಾಟಕ ಹೆಸರು ಕೇಳುತ್ತಿದೆ. ಅದರ ಜೊತೆಗೆ ಇಲಾಖೆಯ ರಾಯಬಾರಿಯಂತೆ ಕೆಲಸ ನಿರ್ವಹಿಸಬೇಕು ಎಂದರು. ಯಾವುದೇ ಉತ್ಪನ್ನಗಳ ಪಾಕೆಟ್‍ಗಳ ಮೇಲೆ ಕನ್ನಡ ಲಿಪಿಯಿರುವಂತೆ ಕ್ರಮ ವಹಿಸಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ.ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಈ ಸಂಸ್ಥೆಯೂ ಎಸ್.ಬಿ.ಎಂ. ರೀತಿಯಲ್ಲಿ ಕಳೆದು ಹೋಗದೆ ಪೈಪೋಟಿಯ ರೀತಿಯಲ್ಲಿ ಬೆಳೆಯುವ ಅಗತ್ಯವಿದ್ದು, ಇದೂ ಕೂಡ ಸ್ವಾಯತ್ತ ಸಂಸ್ಥೆಯಾಗಿ ಉತ್ತಮ ರೀತಿಯಲ್ಲಿ ಬೆಳೆಯಬೇಕು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ