Breaking News

ಅಂಗಡಿಕಾರರು ಅನಗತ್ಯವಾಗಿ ಹೆಚ್ಚಿನ ದರ ಪಡೆದರೆ ಲೈಸೆನ್ಸನ್ನು ರದ್ದು : ಪ್ರಕಾಶ ಹೋಳೆಪ್ಪಗೋಳ

Spread the love

ಗೋಕಾಕ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕಿರಾಣಿ ದಿನಸಿ ಹಾಗೂ ಅಗತ್ಯ ವಸ್ತುಗಳ ಬಗ್ಗೆ ಕೆಲವು ಅಂಗಡಿಗಳಲ್ಲಿ ತಾತ್ಕಾಲಿಕ ಕೊರತೆ ಸೃಷ್ಟಿಸುತ್ತಿರುವ ಬಗ್ಗೆ ಮತ್ತು ಅನಗತ್ಯವಾಗಿ ಹೆಚ್ಚಿನ ದರಗಳನ್ನು ಪಡೆಯುತ್ತಿರುವ ಬಗ್ಗೆ ತಿಳಿದು ಬಂದಿದೆ.

ಇಂತಹ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಈ ತರಹ ಪರಿಸ್ಥಿತಿಯ ಲಾಭ ಪಡೆದು ಗ್ರಾಹಕರನ್ನು ವಂಚಿಸುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ. ಆದ್ದರಿಂದ ತಾಲೂಕಿನ ಎಲ್ಲ ಅಂಗಡಿಕಾರರು ಯಾವುದೇ ರೀತಿ ತಾತ್ಕಾಲಿಕ ಕೊರತೆ ಸೃಷ್ಟಿಸುವುದಾಗಲಿ ಅಥವಾ ಅನಗತ್ಯವಾಗಿ ಹೆಚ್ಚಿನ ದರಗಳನ್ನು ಪಡೆಯುತ್ತಿರುವ ಬಗ್ಗೆ ತಿಳಿದು ಬಂದಲ್ಲಿ, ಇದನ್ನು ಗಂಭೀರವಾಗಿ ಪರಿಗಣಿಸಿ, ಅವರ ಅಂಗಡಿಯ ಮಾರಾಟದ ಲೈಸೆನ್ಸನ್ನು ರದ್ದುಗೊಳಿಸಿ, ಅಗತ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ತಿಳಿಯಪಡಿಸಿದೆ.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮ

Spread the loveಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ