ಕೋಲಾರ: ಗ್ರಾಮ ಪಂಚಾಯತಿ ಚುನಾವಣೆಯ ದ್ವೇಷದ ಹಿನ್ನೆಲೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮುಳಬಾಗಲು ತಾಲೂಕಿನ ರಾಜೆಂದ್ರಹಳ್ಳಿಯಲ್ಲಿ ನಡೆದಿದೆ.
ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ ನೂರ್ ಜಾನ್ ಮನೆಗೆ ವಿರೋಧಿ ಗುಂಪಿನಿಂದ ಬೆಂಕಿ ಹಾಕಿರುವ ಅರೋಪ ಕೇಳಿ ಬಂದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಹಾಗೂ ನಷ್ಟ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಇಟ್ಟಿರುವ ಕಿಡಿಗೇಡಿಗಳ ವಿರುದ್ಧ ನಂಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.