Breaking News
Home / ರಾಜಕೀಯ / ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಶಬರಿಮಲೆ ನಿಯಮ

ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಶಬರಿಮಲೆ ನಿಯಮ

Spread the love

ಕೊಚ್ಚಿ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಜಯ ಗಳಿಸಿದರೆ, ಶಬರಿಮಲೆಯಲ್ಲಿ ಮಹಿಳಾ ಪ್ರವೇಶಾತಿಗೆ ಸಂಬಂಧಿಸಿದಂತೆ ಭಕ್ತರ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಿಯಮ ರೂಪಿಸಲಾಗುವುದು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿಕೆ ನೀಡಿದ್ದಾರೆ.

ಕೊಚ್ಚಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ರಾಮಚಂದ್ರನ್, ಮುಂಬರುವ ಚುನಾವಣೆಯಲ್ಲಿ ಯುಡಿಎಫ್ ಪ್ರಣಾಳಿಕೆಯಲ್ಲಿ ಶಬರಿಮಲೆ ವಿಷಯ ಪ್ರಮುಖ ಅಂಶವಾಗಿರಲಿದೆ ಎಂದು ಹೇಳಿದರು.

ಯುಡಿಎಫ್ ಚುನಾವಣಾ ಪ್ರಣಾಳಿಕೆಯಲ್ಲಿ ಶಬರಿಮಲೆ ಪ್ರಮುಖ ವಿಷಯವಾಗಿರಲಿದೆ. ಯುಡಿಎಫ್ ಅಧಿಕಾರಕ್ಕೆ ಬಂದರೆ ಶಬರಿಮಲೆ ಸಂಬಂಧಿಸಿದಂತೆ ನಿಯಮ ತರಲಾಗುವುದು. ಆಕ್ತರ ಆಚಾರ ಹಾಗೂ ನಂಬಿಕೆಗೆಗಳಿಗೆ ಧಕ್ಕೆ ಬರದಂತೆ ಮುಂದುವರಿಯುವುದು ನಮ್ಮ ನಿಲುವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ