Breaking News

ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ

Spread the love

ಬೆಂಗಳೂರು: ಜೈಲು ವಾಸ ಮುಗಿಸಿರುವ ತಮಿಳರ ಚಿನ್ನಮ್ಮ, ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ಹೊರಟಿದ್ದಾರೆ. ಇದರೊಂದಿಗೆ ಚಿನ್ನಮ್ಮನ ಕೆಲವು ವರ್ಷಗಳ ಬೆಂಗಳೂರು ವಾಸ ಇಂದಿಗೆ ಅಂತ್ಯವಾಗಿದೆ.

ಕಳೆದೊಂದು ವಾರದಿಂದ ನಗರದ ಪ್ರೆಸ್ಟಿಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ.

ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು ವೈಭವದಿಂದ ಸ್ವಾಗತಿಸಲು ಸಿದ್ದತೆ ನಡೆಸಿದ್ದಾರೆ. ಶಶಿಕಲಾ ಬೆಂಬಲಿಗರು ಬೆಂಗಳೂರಿನಲ್ಲಿ ಹಾಕಿದ್ದ ತಮಿಳು ಬ್ಯಾನರ್ ಗಳನ್ನು ಕನ್ನಡ ಪರ ಸಂಘಟನೆ ಕಾರ್ಯಕರ್ತರು ರವಿವಾರ ಕಿತ್ತು ಹಾಕಿದ ಘಟನೆಯೂ ನಡೆದಿತ್ತು.

ದೂರು: ವಿ.ಕೆ. ಶಶಿಕಲಾ ತಮಿಳುನಾಡಿ ನಾದ್ಯಂತ ಹಿಂಸೆ ನಡೆಸಲು ಸಂಚು ರೂಪಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಪಕ್ಷ ಭಾನುವಾರ ಪೊಲೀಸರಿಗೆ ದೂರು ನೀಡಿದೆ.

ಏಪ್ರಿಲ್‌- ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿ ರುವ ಹಿನ್ನೆಲೆಯಲ್ಲಿ ದಿ.ಜಯಲಲಿತಾ ಆಪ್ತೆ ರಾಜಕೀಯವಾಗಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ. ಎಐಎಡಿಎಂಕೆ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮ್ಮಾ ಮಕ್ಕಳ್‌ ಮುನ್ನೇತ್ರ ಕಳಗಂ ಪಕ್ಷದ ಸಂಸ್ಥಾಪಕ, ಶಾಸಕ ಟಿ.ಟಿ.ವಿ.ದಿನಕರನ್, ಇದು ತೇಜೋವಧೆಯ ತಂತ್ರ ಎಂದಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ