Breaking News

ಲಕ್ಷ್ಮೀನ ಶಿಕ್ಷಣ ಸಂಸ್ಥೆಯಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನೆಯನ್ನು ಸುವರ್ಣಾ ಭೀಮಶಿ ಜಾರಕಿಹೊಳಿ ನೆರವೇರಿಸಿದರು.

Spread the love

 

ಗೋಕಾಕ: ಮಕ್ಕಳಿಗೆ ಉಪಕರಣಗಳೊಂದಿಗೆ ಪ್ರಾಯೋಗಿಕವಾಗಿ ಕಲಿಸುವ ಕಲಿಕಾ ಕ್ರಮವು ಅತ್ಯಂತ ಪರಿಣಾಮಕಾರಿ ಆಗಿರುತ್ತದೆ ಎಂದು ಬೆಂಗಳೂಇನ ಕ್ರೀಡೋ ಸಂಸ್ಥೆಯ ಆಯೇಷಾ ಶೇಖ ಹೇಳಿದರು.
ಶನಿವಾರ ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟಿನಿಂದ ಕ್ರೀಡೋ ಸಂಸ್ಥೆಯ ಮಾರ್ಗದರ್ಶನದಲ್ಲಿ ಆರಂಭಗೊಂಡ ಆಂಗ್ಲ ಮಾಧ್ಯಮ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪ್ರೀ-ಪ್ರಾಯಮರಿ ಶಾಲೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಅಧುನಿಕ ಕಲಿಕಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು.
ಕಲಿಕೆಯು ಕಂಠ ಪಾಠಕ್ಕೆ ಸೀಮಿತವಾಗದೇ ಅರ್ಥ ಪೂರ್ಣವಾಗಿರಬೇಕು. ಮಕ್ಕಳು ಕೇಳುವ ಕೂತೂಹಲಕಾರಿ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಬೇಕು. ಅವರಿಗೆ ಮನೆ ಮತ್ತು ಶಾಲೆಗಳಲ್ಲಿ ಉತ್ತಮವಾದ ವಾತಾವರಣ ಕಲ್ಪಿಸುವುದರಿಂದ ಅವರ ಸರ್ವಾಂಗೀಣ ಬೆಳವಣಿಗೆಯಾಗಿ ಪ್ರತಿಭಾನ್ವಿತರಾಗಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷೆ ಸುವರ್ಣ ಭೀಮಶಿ ಜಾರಕಿಹೊಳಿ ಉದ್ಘಾಟಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿದೇಶಕ ಸನತ್ ಜಾರಕಿಹೊಳಿ, ಅಂಗ ಸಂಸ್ಥೆಗಳ ಮುಖ್ಯೋಪಾಧ್ಯಾಯರಾದ ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗ್ನೀಸ್, ಪಿ.ವಿ.ಚಚಡಿ, ಉಪನ್ಯಾಸ ಅರುಣ ಪೂಜೇರ, ಶಿಕ್ಷಕಿ ನೈನಾ ಪಾರೂಳಕರ ಇದ್ದರು.
ಶಿಕ್ಷಕಿ ಪ್ರಿಯಾಂಕಾ ಹಂದಿಗುಂದ ಸ್ವಾಗತಿಸಿ, ವಂದಿಸಿದರು.


Spread the love

About Laxminews 24x7

Check Also

ಜು.4ರಂದು ವಿಟಿಯು ಘಟಿಕೋತ್ಸವ: ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸೇರಿ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಪ್ರದಾನ

Spread the loveಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ