Breaking News

ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

Spread the love

ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ.

ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ ಹಾರಿದವರು.

ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಪೊಲೀಸರು ರಕ್ಷಣೆಗೆ ಮುಂದಾಗಲಿಲ್ಲ ಎಂದು ಆರೋಪಿಸಿ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ