Breaking News

ಪೊಲೀಸ್ ದಾಳಿಗೆ ಹೆದರಿ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ನೀರು ಪಾಲು

Spread the love

ರಾಮದುರ್ಗ: ಯುವಕರ ಗುಂಪು ಜೂಜಾಟದಲ್ಲಿ ತೊಡಗಿದ್ದು, ಪೊಲೀಸ್ ದಾಳಿ ನಡೆಸಿದ್ದರಿಂದ ಇಬ್ಬರು ಮಲಪ್ರಭಾ ನದಿಗೆ ಹಾರಿದ ಘಟನೆ ನಡೆದಿದೆ.

ನದಿಯ ಪಕ್ಕದ ಪೊದೆಯ ಬಳಿ ಗುಂಪು ಪೊಲೀಸರು ಬಂದಿದ್ದರಿಂದ ಹೆದರಿ ಓಡಿಹೋಗಿದ್ದಾರೆ. ಈ ವೇಳೆ ಇಬ್ಬರು ನದಿ ನೀರಿಗೆ ಹಾರಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆದಿದೆ.ಪೊಲೀಸರು, ಅಗ್ನಿಶಾಮಕ ದಳದವರು ಹಾಗೂ ಈಜು ತಜ್ಞರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮಂಜುನಾಥ ಲಕ್ಷ್ಮಣ ಬಂಡಿವಡ್ಡರ (28) ಹಾಗೂ ಸಮೀರ ಮಹಮದಸಾಬ ಬಟಕುರ್ಕಿ (23) ನದಿಗೆ ಹಾರಿದವರು.

ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಪೊಲೀಸರು ರಕ್ಷಣೆಗೆ ಮುಂದಾಗಲಿಲ್ಲ ಎಂದು ಆರೋಪಿಸಿ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ