ಬೆಂಗಳೂರು : ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್. ಈ ಬಗ್ಗೆ ಟ್ವಿಟ್ ಮೂಲಕ ತಿಳಿಸಿರುವ ಪಾಟೀಲ್ ಅವರು , ಸಣ್ಣ ಪ್ರಮಾಣದ ಅನಾರೋಗ್ಯದ ಕಾರಣ ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದರಿಂದ ನನಗೆ ಸದನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.
ಅದರೊಂದಿಗೆ, ವೈದ್ಯರ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿರುವದಾಗಿಯೂ,ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಹಾಗೂ ಶೀಘ್ರದಲ್ಲೇ ಗುಣಮುಖನಾಗಲಿದ್ದೇನೆ ಎಂದು ತಿಳಿಸಿದ್ದಾರೆ.