Breaking News

ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ : ಸತೀಶ್ ಜಾರಕಿಹೊಳಿ,

Spread the love

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ 2-3 ಸುತ್ತಿನ ಸಭೆ ನಡೆದಿದೆ. ಪಕ್ಷದವರು ಮೂವರ ಹೆಸರನ್ನು ವರಿಷ್ಠರಿಗೆ ಕಳುಹಿಸಿದ್ದಾರೆ. ಪಕ್ಷ ಹೇಳಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.

ಇನ್ನು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಉಪಸಮಿತಿ ರಚನೆಯಾಗಿದೆ. ಉಪಸಮಿತಿ ಸಭೆ ಸೇರಿ ಸರ್ಕಾರಕ್ಕೆ ವರದಿ ಕೊಡಬೇಕು. ವರದಿ ನೀಡದೇ ಮೀಸಲಾತಿ ನೀಡಲಾಗಲ್ಲ. ಹಾಗಾಗಿ ವಾಲ್ಮೀಕಿ ಸಮಾವೇಶದಲ್ಲಿ ಈ ಬಗ್ಗೆ ಯಾವುದೇ ಘೋಷಣೆ ಇಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ

Spread the loveಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್‌ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ