Breaking News

ಬಜೆಟ್ ಪೂರ್ವಭಾವಿ ಸಭೆ,ಜನಾರ್ದನ ಹೋಟೆಲ್​​ನಲ್ಲಿ ಬಿಸಿ ಬಿಸಿ ಮಸಾಲೆ ದೋಸೆ ಹಾಗೂ ಬಿಸಿ ಬಿಸಿ ಕಾಫಿ

Spread the love

ಬೆಂಗಳೂರು: ಮುಂದಿನ ತಿಂಗಳು ಬಜೆಟ್ ಮಂಡಿಸಲು ಸಿದ್ಧವಾಗಿರುವ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ನಗರದ ಶಿವಾನಂದ ಸರ್ಕಲ್ ನಲ್ಲಿರುವ ಜನಾರ್ದನ ಹೋಟೆಲ್​​ನಲ್ಲಿ ಬಿಸಿ ಬಿಸಿ ಮಸಾಲೆ ದೋಸೆ ಹಾಗೂ ಬಿಸಿ ಬಿಸಿ ಕಾಫಿ ಸವಿದರು.

ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಕೆಂಗಲ್ ಹನುಮಂತಯ್ಯ ಜನ್ಮದಿನಾಚರಣೆ ಪ್ರಯುಕ್ತ ಮಾಲಾರ್ಪಣೆ ನೆರವೇರಿಸಿದ ನಂತರ ಬಜೆಟ್ ಪೂರ್ವ ಸಿದ್ಧತಾ ಸಭೆ ನಡೆಸಲು ಶಕ್ತಿಭವನಕ್ಕೆ ತೆರಳುವ ಮುನ್ನ ಜನಾರ್ದನ ಹೋಟೆಲ್​ಗೆ ತೆರಳಿ ದೋಸೆ ಹಾಗೂ ಕಾಫಿ ಸವಿದರು. ಸಿಎಂಗೆ ಸಚಿವ ಉಮೇಶ್ ಕತ್ತಿ ಹಾಗೂ ವಿಧಾನಪರಿಷತ್‌ ಸದಸ್ಯರಾದ ಎಚ್.ವಿಶ್ವನಾಥ್ ಮತ್ತು ಎಸ್.ವಿ. ಸಂಕನೂರ್ ಸಹ ಸಾಥ್ ನೀಡಿದರು.

ಸದಾ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಎಚ್ ವಿಶ್ವನಾಥ್ ಅವರು ಇಂದು ಹೋಟೆಲ್ ನಲ್ಲಿ ಸಿಎಂ ಜತೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದರು.

ಯಡಿಯೂರಪ್ಪ ಅವರಿಗೆ ಇಷ್ಟದ ಹೋಟೆಲ್​​ಗಳಲ್ಲಿ ಒಂದಾಗಿರುವ ಜನಾರ್ದನಕ್ಕೆ ಆಗಾಗ ಭೇಟಿ ನೀಡುವ ಸಿಎಂ, ಇಂದು ಕೂಡ ಭೇಟಿ ನೀಡಿ ಮಸಾಲೆ ದೋಸೆ ಸೇವಿಸಿ ಬಿಸಿ ಬಿಸಿ ಕಾಫಿ ಹೀರಿದರು. ನಂತರ ಶಕ್ತಿಭವನಕ್ಕೆ ತೆರಳಿ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದರು.‌


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ