Breaking News

ಪೆಟ್ರೋಲ್- ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ವಿನೂತನ ಪ್ರತಿಭಟನೆ

Spread the love

ಬೆಂಗಳೂರು, ಫೆ.11- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಸಿಲಿಂಡರ್‍ಅನ್ನು ಕತ್ತೆಯ ಮೇಲಿಟ್ಟು ಪ್ರತಿಭಟಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.

ನಂತರ ಮಾತನಾಡಿದ ಅವರು, ನಿರಂತರವಾಗಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಬದುಕು ಬರ್ಬಾದ್ ಆಗಿದೆ. ದಿನಸಿ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಆಳುವ ಸರ್ಕಾರಗಳು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಬರಬೇಕಾಗಿದ್ದ ಸರ್ಕಾರ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ