Breaking News

ಸಿದ್ದರಾಮಯ್ಯ ಜೊತೆಗೂಡಿ ಮತ್ತೆ ಹೋರಾಟಕ್ಕೆ ಮರಳಿದ್ದೇನೆ: ಡಾ.ಎಚ್‌.ಸಿ. ಮಹದೇವಪ್ಪ

Spread the love

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ, ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ, ಮಾತುಕತೆ ನಡೆಸಿದರು.

ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ನಾನು ಮತ್ತು ಸಿದ್ದರಾಮಯ್ಯ 1989 ರಿಂದಲೂ ಆತ್ಮೀಯರು. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಕೇವಲ ಅಂತೆಕಂತೆ ಅಷ್ಟೇ. ಪ್ರಜಾಪ್ರಭುತ್ವಕ್ಕೆ ಅಪಾಯದ ಸಮಯ ಬಂದಾಗಲೆಲ್ಲಾ ನಾವು ಹೋರಾಟ ಮಾಡಿದ್ದೇವೆ’ ಎಂದು ಹೇಳಿದ್ದಾರೆ.

‘ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ’ ಎಂದಿದ್ದಾರೆ.

‘ಇದೀಗ ದೇಶದಲ್ಲಿ ಸಂವಿಧಾನಾತ್ಮಕ ವಾತಾವರಣವೇ ಕೆಡುತ್ತಿರುವುದರಿಂದ, ಜನಪರವಾದ ದನಿಗಳೇ ರಾಜಕೀಯ ವಲಯದಲ್ಲಿ ಕ್ಷೀಣಿಸುತ್ತಿರುವುದರಿಂದ ನಾನು ಮತ್ತು ಸಿದ್ದರಾಮಯ್ಯನವರು ಹೋರಾಟಗಳನ್ನು ಸಂಘಟಿಸುವ ಮತ್ತು ಸಾಮಾಜಿಕ ನ್ಯಾಯದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಶ್ರಮಿಸಲು ನಿರ್ಧರಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

12 ಸಾವಿರ ಉದ್ಯೋಗಿಗಳ ಕಡಿತ; ಟಿಸಿಎಸ್​​ಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಸಮನ್ಸ್

Spread the loveಬೆಂಗಳೂರು: ಹನ್ನೆರಡು ಸಾವಿರದಷ್ಟು ಬೃಹತ್ ಸಂಖ್ಯೆಯ ಉದ್ಯೋಗಿಗಳನ್ನು ಕೆಲಸದಿಂದ ತಗೆದುಹಾಕುವುದಕ್ಕೆ ಸಂಬಂಧಪಟ್ಟಂತೆ ವಿವರಣೆ ಕೇಳಿ ರಾಜ್ಯ ಕಾರ್ಮಿಕ ಇಲಾಖೆಯು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ