Breaking News

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ:

Spread the love

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ..ರಮೇಶ ಜಾರಕಿಹೊಳಿ

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಮಂತ್ರಿಯಾಗಿ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಅದೇ ರೀತಿ ಸಮಾಜದ ಪ್ರತಿನಿಧಿಯಾಗಿ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.

ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಯಾವುದೇ ರೀತಿ ತಾಂತ್ರಿಕ ಸಮಸ್ಯೆ ಇಲ್ಲ. ಇನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮೀಸಲಾತಿ ಕೇಳುವ ಹಕ್ಕಿದೆ ಎಂದರು.

ಅದೇ ರೀತಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ. ಹೀಗಾಗಿಯೆ ಮೊನ್ನೆ ವಾಲ್ಮೀಕಿ ಜಾತ್ರೆಗೆ ಬಂದಿದ್ದರು. ಇಲ್ಲದೇ ಹೋಗಿದ್ದರೆ ಜಾತ್ರೆಗೆ ಬರುತ್ತಿರಲಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ