Breaking News

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ:

Spread the love

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ..ರಮೇಶ ಜಾರಕಿಹೊಳಿ

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಮಂತ್ರಿಯಾಗಿ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಅದೇ ರೀತಿ ಸಮಾಜದ ಪ್ರತಿನಿಧಿಯಾಗಿ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.

ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಯಾವುದೇ ರೀತಿ ತಾಂತ್ರಿಕ ಸಮಸ್ಯೆ ಇಲ್ಲ. ಇನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮೀಸಲಾತಿ ಕೇಳುವ ಹಕ್ಕಿದೆ ಎಂದರು.

ಅದೇ ರೀತಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ. ಹೀಗಾಗಿಯೆ ಮೊನ್ನೆ ವಾಲ್ಮೀಕಿ ಜಾತ್ರೆಗೆ ಬಂದಿದ್ದರು. ಇಲ್ಲದೇ ಹೋಗಿದ್ದರೆ ಜಾತ್ರೆಗೆ ಬರುತ್ತಿರಲಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ