Breaking News

ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

Spread the love

ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.

ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.

 

ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಹಿನ್ನೆಲೆಯಲ್ಲಿ ಬೆಟಗೇರಿ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ