Breaking News
Home / ರಾಜ್ಯ / ಹೆತ್ತ ತಾಯಿಯನ್ನು ದೇವಸ್ಥಾನದಲ್ಲಿ ಬಿಟ್ಟು ಪರಾರಿಯಾದ ಮಕ್ಕಳು

ಹೆತ್ತ ತಾಯಿಯನ್ನು ದೇವಸ್ಥಾನದಲ್ಲಿ ಬಿಟ್ಟು ಪರಾರಿಯಾದ ಮಕ್ಕಳು

Spread the love

ಕೊಪ್ಪಳ: ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎನ್ನುವ ಮಾತಿದೆ. ಇದರ ಅರ್ಥ ತಾಯಿ ಒಬ್ಬಳು ಮನೆಯಲ್ಲಿದ್ದರೆ ಬೇರೆ ಯಾವ ಸಂಬಂಧದ ಅಗತ್ಯವು ಎಲ್ಲ ಎನ್ನುವುದಾಗಿದೆ. ಆದರೆ ಕೊಪ್ಪಳದಲ್ಲಿ ಈ ಮಾತು ಸುಳ್ಳಾಗುವಂತಹ ಘಟನೆಯೊಂದು ನಡೆದಿದೆ. ಹೌದು ಮನೆಯಲ್ಲಿದ್ದ ಹೆತ್ತ ತಾಯಿಯನ್ನೇ ಮಕ್ಕಳು ದೇಗುಲದಲ್ಲಿ ಬಿಟ್ಟು ಹೋಗಿ ಅಮಾನವೀಯತೆಯನ್ನು ಮೆರೆದಿದ್ದಾರೆ.

ಕೊಪ್ಪಳದ ಬಂಡಿ ದುರ್ಗಾದೇವಿ ದೇವಸ್ಥಾನದಲ್ಲಿ ಗ್ಯಾಂಗ್ರಿನ್‌ನಿಂದ ಕಾಲು ಕಳೆದುಕೊಂಡು ನರಳುತ್ತಿರುವ ತಾಯಿಯನ್ನು ಅನಾಥವಾಗಿ ಮಕ್ಕಳು ಬಿಟ್ಟು ಹೋಗಿದ್ದಾರೆ. ವೀರೇಶ್ ಮತ್ತು ಚಂದ್ರಕಾಂತ್ ಎಂಬ ಇಬ್ಬರು ಪುತ್ರರು ತಾಯಿ ದ್ರಾಕ್ಷಾಯಣಮ್ಮರನ್ನು ದೇವಾಲಯದಲ್ಲಿ ಬಿಟ್ಟು ಹೋಗಿದ್ದು, ಸದ್ಯ ದ್ರಾಕ್ಷಾಯಣಮ್ಮ ಅಕ್ಕಪಕ್ಕದವರು ನೀಡುವ ಊಟ ತಿಂದು ಕಾಲಕಳೆಯುವ ಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಗ್ಯಾಂಗ್ರಿನ್​ನಿಂದ ದ್ರಾಕ್ಷಾಯಣಮ್ಮನ ಕಾಲು ತುಂಡಾಗಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಗೂ ಕೂಡ ಮಕ್ಕಳು ಬಂದಿರಲಿಲ್ಲ. ಕೊನೆಗೆ ಆಸ್ಪತ್ರೆಯ ವೈದ್ಯರೇ ದ್ರಾಕ್ಷಾಯಣಮ್ಮನವರ ಮನೆಗೆ ಬಿಟ್ಟು ಹೋಗಿದ್ದರು. ಆದರೆ ತಾಯಿಯನ್ನು ನೋಡಿಕೊಳ್ಳಲಾಗದ ಮಕ್ಕಳು ಮತ್ತೆ ಪುನಃ ಒಂದು ವಾರದ ಹಿಂದೆಯಷ್ಟೇ ದೇವಸ್ಥಾನದಲ್ಲಿ ತಾಯಿಯನ್ನ ಬಿಟ್ಟು ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ