Breaking News

ರಾಜ್ಯದ SC, ST ಉದ್ದಿಮೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಸಹಾಯಧನ ಶೇ.50 ರಿಂದ ಶೇ.75ಕ್ಕೆ ಹೆಚ್ಚಳ

Spread the love

ಬೆಂಗಳೂರು : ರಾಜ್ಯದ SC, ST ಉದ್ದಿಮೆದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸಹಾಯಧನ ಶೇ.50 ರಿಂದ ಶೇ.75ಕ್ಕೆ ಹೆಚ್ಚಳಗೊಳಿಸಿ ಆದೇಶ ಹೊರಡಿಸಿದೆ.

ಯೆಸ್, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನ/ಶೆಡ್ ಗಳನ್ನು ನೀಡುವಲ್ಲಿ ಖಾಲಿ ಇರುವ ಸಹಾಯಧನವನ್ನು ಶೇ.50 ರಿಂದ ಶೇ 75 ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಹೊರಡಿಸಿದ. ಸದರಿ ಆದೇಶದಲ್ಲಿ ವಿಧಿಸಲಾಗಿರುವ ಷರತ್ತು ಮತ್ತು ಕೆಲವು ನಿಬಂಧನೆಗಳನ್ನು ಮಾರ್ಪಡಿಸಿ ಬಗ್ಗೆ ಪಿ ಆರ್ ಲತಾ, ಪೀಠಾಧಿಕಾರಿ , ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇವರು ಆದೇಶ ಹೊರಡಿಸಿದ್ದಾರೆ.

ಏನಿದೆ ಆದೇಶದಲ್ಲಿ..?

1) ಶೇ 75 ರಷ್ಟು ಭೂ ಸಹಾಯಧನ ಸೌಲಭ್ಯವನ್ನು 2019-20 ನೇ ಸಾಲಿನಿಂದ KIADB ಹಾಗೂ KSSSIDC ಸಂಸ್ಥೆಗಳಿಂದ ಭೂ ಹಂಚಿಕೆ ಪಡೆದಿರುವ ಹಂಚಿಕೆದಾರರಿಗೆ ಪೂರ್ವಾನ್ವಯವಾಗಿ ದಿನಾಂಕ 01:14:2019 ರಿಂದ ನೀಡುವುದು.

2) ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯಿಂದ ಫಲಾನುಭವಿಯೊಬ್ಬರಿಗೆ ಕನಿಷ್ಟ 2 ಎಕರೆ ಜಮೀನನನ್ನು ಶೇ 75 ರಷ್ಟು ರಿಯಾಯಿತಿ ದರದಲ್ಲಿ ನೀಡಬಹುದು.

3) ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ನಿವೇಶನ/ಶೆಡ್ ಗಳ ಮೇಲೆ ನೀಡುವ ರಿಯಾಯಿತಿಯು ಒಟ್ಟು ದರದ ಶೇ 75 ರಷ್ಟು ಆಗಿರುತ್ತದೆ.

 


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ