Breaking News

ಕೃಷಿ ಕಾಯ್ದೆ ವಿರೋಧಿಸಿ “ರೈಲ್ ರೋಖೋ” ಚಳುವಳಿ, ಪ್ರತಿಭಟನಾಕಾರರು ವಶಕ್ಕೆ

Spread the love

: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರೋ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ವಿಜಯಪುರ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಹಲವಾರು ರೈತರು ರೈಲು ತಡೆಯಲು ಮುಂದಾಗಿದ್ದು, ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ವಿಜಯಪುರ ರೈತರು ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತರು, ಕಾರ್ಮಿಕ ಸಂಘಟನೆಗಳು ಸೇರಿ ವಿಜಯಪುರದಲ್ಲಿ ರೈಲ್​ ರೊಕೋ ಚಳವಳಿಗೆ ಮುಂದಾಗಿದ್ದವು. ಆದ್ರೆ ಇಂದು ಬೆಳಗ್ಗೆ ರೇಲ್ವೆ ನಿಲ್ದಾಣಕ್ಕೆ ಆಗಮಿಸಿದ ರೈತರು ನಿಲ್ದಾಣದ ಒಳಗೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದು, ಪ್ರವೇಶ ದ್ವಾರಕ್ಕೆ ಬ್ಯಾರಿಕೇಡ್ ಹಾಕಿದ್ದಾರೆ.

ಸ್ಥಳದಲ್ಲಿ ಒಂದು ಡಿಎಆರ್​ ತುಕಡಿ, ಓರ್ವ ಸಿಪಿಐ, ಮೂವರು ಪಿಎಸ್‌ಐ ಹಾಗೂ ಮೂವತ್ತಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ರೈಲ್ವೇ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರರು ಪ್ರತಿಭಟನೆಗೆ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬಸವ ಎಕ್ಸ್​ಪ್ರೆಸ್ ರೈಲು​ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರ ಕಾವಲಿನ ನಡುವೆಯೂ ಪ್ರತಿಭಟನಾಕಾರರು ರೈಲನ್ನ ತಡೆಯಲು ಮುಂದಾದ್ರು. ಈ ಸಮಯದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ